Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:46 - ಕನ್ನಡ ಸತ್ಯವೇದವು C.L. Bible (BSI)

46 ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:46
15 ತಿಳಿವುಗಳ ಹೋಲಿಕೆ  

ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಈಗ ಒಬ್ಬ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಸರ್ವೇಶ್ವರನ ಶಕ್ತಿ ಪ್ರಾಪ್ತವಾಗುತ್ತಿತ್ತು).


ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಜನರು ಅನುಸರಿಸುವ ಮಾರ್ಗದಲ್ಲಿ ನಾನು ನಡೆಯಬಾರದೆಂದು ಸರ್ವೇಶ್ವರ ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಎಚ್ಚರಿಕೆ ಇತ್ತರು:


ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ.


ಆಗ ಎಲೀಷನು ಗೇಹಜಿಗೆ, “ನೀನು ಹೋಗಿ, ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ, ಆ ಹುಡುಗನ ಮುಖದ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಯಾವ ವಂದನೆಯನ್ನೂ ಸ್ವೀಕರಿಸಬೇಡ," ಎಂದು ಹೇಳಿ ಕಳುಹಿಸಿದನು.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಶೂರನಂತೆ ನಡುಕಟ್ಟಿ ನಿಲ್ಲು ನಾನು ಹಾಕುವ ಪ್ರಶ್ನೆಗೆ ಉತ್ತರ ನೀಡು:


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ನಡುಕಟ್ಟಿ ಕೆಲಸಕ್ಕೆ ನಿಲ್ಲುತ್ತಾಳೆ, ದುಡಿಮೆಯಲ್ಲಿ ತೋಳ್ಬಲವನ್ನು ತೋರ್ಪಡಿಸುತ್ತಾಳೆ.


ಅವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದ; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಆ ವ್ಯಕ್ತಿ ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು