Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:7 - ಕನ್ನಡ ಸತ್ಯವೇದವು C.L. Bible (BSI)

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ತಟ್ಟನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗ ನಮಸ್ಕಾರ ಮಾಡಿದನು. “ತಾವು ನನ್ನ ಸ್ವಾಮಿ ಎಲೀಯರೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಫಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗನಮಸ್ಕಾರ ಮಾಡಿ - ನೀನು ನನ್ನ ಸ್ವಾವಿುಯಾದ ಎಲೀಯನೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:7
16 ತಿಳಿವುಗಳ ಹೋಲಿಕೆ  

ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.


ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಜೋರ್ಡನ್ ನದಿಯಲ್ಲಿಳಿದು ಅರಸನ ಮನೆಯವರನ್ನು ದಾಟಿಸುವುದಕ್ಕೂ ಅವರಿಗೆ ಬೇಕಾದ ಸಹಾಯಮಾಡುವುದಕ್ಕೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಜೋರ್ಡನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿದನು.


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ.


ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ, ನಾವು ನಿನಗೆ ಗುಲಾಮರು,” ಎಂದು ಹೇಳಿದರು.


ಆದುದರಿಂದ ತಮ್ಮಲ್ಲಿ ನಾನು ಮಾಡುವ ಪ್ರಾರ್ಥನೆ ಇದು; ಈ ಹುಡುಗನಿಗೆ ಬದಲಾಗಿ, ತಮ್ಮ ಸೇವಕನಾದ ನನ್ನನ್ನು ತಮ್ಮ ಗುಲಾಮನನ್ನಾಗಿ ಇರಿಸಿಕೊಳ್ಳಿ; ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆ ಅನುಗ್ರಹಿಸಿ.


ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು.


ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?" ಎಂದನು.


ಎಂತಲೇ ಆಕೆ, “ನನ್ನಂಥ ಮುದುಕಿಗೆ ಸಂಭೋಗ ಸಾಧ್ಯವೆ? ನನ್ನ ಯಜಮಾನರೂ ಮುದುಕರಲ್ಲವೆ?” ಎಂದುಕೊಂಡು ನಕ್ಕಳು.


ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,


ಎಲೀಯನು, “ಹೌದು; ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆಂದು’ ಹೇಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು