Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:13 - ಕನ್ನಡ ಸತ್ಯವೇದವು C.L. Bible (BSI)

13 ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಡೆಗೆ ಮಂದಮಾರುತ ಶಬ್ದ! ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:13
11 ತಿಳಿವುಗಳ ಹೋಲಿಕೆ  

ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.


ಬಳಿಕ ನಾನು ಕೈ ತೆಗೆವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವೆ. ಆದರೆ ನನ್ನ ಮುಖ ನಿನಗೆ ಕಾಣಿಸದು,” ಎಂದು ಸರ್ವೇಶ್ವರ ಹೇಳಿದರು.


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.


ಆಗ ಯೋನನು ನಗರವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋದನು. ಅಲ್ಲಿ ತನಗಾಗಿ ಒಂದು ಗುಡಿಸಲನ್ನು ಕಟ್ಟಿಕೊಂಡನು. ನಗರಕ್ಕೆ ಏನು ಸಂಭವಿಸುತ್ತದೋ ಎಂಬುದನ್ನು ನೋಡಲು ಅದರ ನೆರಳಿನಲ್ಲಿ ಕುಳಿತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು