Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:16 - ಕನ್ನಡ ಸತ್ಯವೇದವು C.L. Bible (BSI)

16 ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:16
11 ತಿಳಿವುಗಳ ಹೋಲಿಕೆ  

ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.


ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಮದುವೆಮಾಡಿಕೊಡುವ ಸಮಯ ಬಂದಾಗ ಸೌಲನು ತನ್ನ ಮಗಳು ಮೇರಬಳನ್ನು ದಾವೀದನಿಗೆ ಬದಲಾಗಿ, ಮೆಹೋಲದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.


ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.


ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.


ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು