Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:2 - ಕನ್ನಡ ಸತ್ಯವೇದವು C.L. Bible (BSI)

2 ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:2
18 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು.


ಆಗ ಅವರು ಅಹಾಬನಿಗೆ, “ಸಮಾರಿಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು; ಲೆಕ್ಕವಿಲ್ಲದ ನನ್ನ ಸೈನಿಕರು ಅದರಲ್ಲಿ ಒಂದು ಹಿಡಿ ಧೂಳನ್ನೂ ಬಿಡುವುದಿಲ್ಲ; ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದನು.


ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು.


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು.


ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲ ಇಸ್ರಯೇಲರಲ್ಲೂ ಯೆಹೂದ್ಯರಲ್ಲೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸುವುದಾಗಿ ಸರ್ವೇಶ್ವರನಾದ ದೇವರು ದಾವೀದನಿಗೆ ವಾಗ್ದಾನ ಮಾಡಿದ್ದಾರೆ.


ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.


ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು