Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:10 - ಕನ್ನಡ ಸತ್ಯವೇದವು C.L. Bible (BSI)

10 ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:10
23 ತಿಳಿವುಗಳ ಹೋಲಿಕೆ  

“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.


ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ರೆಹಬ್ಬಾಮನು ಅರಸನಾದನು.


ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.


ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.


ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ಆ ಕೋಟೆಯನ್ನು ದಾವೀದನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ‘ದಾವೀದ ನಗರ’ ಎಂದು ಹೆಸರಾಯಿತು.


ದಾವೀದನು ಸತ್ತು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಈಜಿಪ್ಟಿನಲ್ಲಿದ್ದ ಹದದನು ಕೇಳಿದನು. ಫರೋಹನಿಗೆ ಅವನು, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ಅಪ್ಪಣೆಕೊಡಿ,” ಎಂದನು.


ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ರೆಹಬ್ಬಾಮನು ಅರಸನಾದನು.


ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.


ರೆಹಬ್ಬಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗ ಅಬೀಯಾಮನು ಅವನ ಸ್ಥಾನದಲ್ಲಿ ಅರಸನಾದನು.


ಅಬೀಯಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು.


ಅವನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.


ಯೆಹೂದ್ಯರ ಅರಸ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗ ಅಹಜ್ಯ ಎಂಬುವನು ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.


ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.


ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಜೆರುಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಜೆರುಸಲೇಮಿಗೆ ತಂದು ದಾವೀದ ನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಯೋತಾಮನು ಸತ್ತು ಪಿತೃಗಳ ಬಳಿ ಸೇರಲು ಅವನ ಶವವನ್ನು ಅವನ ಪೂರ್ವಜನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಾಜನು ಅರಸನಾದನು.


ಅವನು ಸತ್ತು ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಹಿಜ್ಕೀಯನು ಅರಸನಾದನು.


ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು