Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:26 - ಕನ್ನಡ ಸತ್ಯವೇದವು C.L. Bible (BSI)

26 ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ - ನೀನು ಅಣತೋತಿನಲ್ಲಿರುವ ನಿನ್ನ ಸ್ವಾಸ್ತ್ಯಕ್ಕೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:26
16 ತಿಳಿವುಗಳ ಹೋಲಿಕೆ  

ಗಿಬ್ಯೋನ್, ಗೆಬ, ಗೆನತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು ದೊರೆತವು.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.


ನೀನು ಹೀಗೆ ಮಾಡುವುದು ಸರಿಯಲ್ಲ. ಸರ್ವೇಶ್ವರನಾಣೆ, ಅವರ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೆಂಬುದೇನೋ ನಿಜ. ಅರಸನ ತಲೆಯ ಬಳಿಯಲ್ಲಿದ್ದ ಭರ್ಜಿ, ತಂಬಿಗೆ ಏನಾದವೋ, ನೋಡು,” ಎಂದು ಕೂಗಿ ಹೇಳಿದನು.


ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ?


“ನನ್ನ ಶೋಧನೆ-ವೇದನೆಗಳಲ್ಲಿ ನನ್ನನ್ನು ಬಿಟ್ಟಗಲದೆ ಇದ್ದವರು ನೀವು.


ಗಲ್ಲೀಮ್ ಗ್ರಾಮಸ್ಥರೇ, ಕೂಗಿ ಕಿರಿಚಿಕೊಳ್ಳಿ. ಲಯೇಷದ ಜನರೇ, ಕಿವಿಗೊಡಿರಿ. ಅನಾತೋತಿನ ಜನರೇ, ಪ್ರತ್ಯುತ್ತರ ಕೊಡಿ.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.


ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು.


ಇದನ್ನು ಕೇಳಿದ್ದೇ ದಾವೀದನು ಆ ವ್ಯಕ್ತಿಯ ಮೇಲೆ ಕಡುಕೋಪಗೊಂಡು ನಾತಾನನಿಗೆ, “ಸರ್ವೇಶ್ವರನಾಣೆ, ಆ ವ್ಯಕ್ತಿ ಸಾಯಲೇ ಬೇಕು.


ನಿನ್ನ ವೈರಿಯೇ ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೀನು ನೋಡುವೆ. ಇಸ್ರಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು