Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:33 - ಕನ್ನಡ ಸತ್ಯವೇದವು C.L. Bible (BSI)

33 ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೂ ಅವನ ಸಂತಾನದವರ ತಲೆಯ ಮೇಲೂ ಇರಲಿ; ಆದರೆ ದಾವೀದನಿಗೂ ಅವನ ಸಿಂಹಾಸನವನ್ನೇರುವ ಸಂತಾನದವರಿಗೂ ಸರ್ವೇಶ್ವರನಿಂದ ನಿತ್ಯಸೌಭಾಗ್ಯ ದೊರಕಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ ಕುಟುಂಬ ಸಂತಾನಗಳಿಗೂ ಯೆಹೋವನಿಂದ ನಿತ್ಯ ಸೌಭಾಗ್ಯವು ದೊರಕಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:33
24 ತಿಳಿವುಗಳ ಹೋಲಿಕೆ  

ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಅಂತೆಯೆ ರಾಜನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ರಾಜ್ಯಭಾರ ನೀತಿಯಾಧಾರದಿಂದ ಸುಸ್ಥಿರ.


“ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II


ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II


ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II


ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.


ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .


ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು