Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:42 - ಕನ್ನಡ ಸತ್ಯವೇದವು C.L. Bible (BSI)

42 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರು ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ಖಂಡಿತವಾಗಿ ಹೇಳಿ ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡನಲ್ಲವೆ? ಆಗ ನೀನು, ‘ಒಳ್ಳೆಯದು, ಹಾಗೆಯೇ ಮಾಡುತ್ತೇನೆ,’ ಎಂದು ಹೇಳಿದೆಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣತೆಗೆದುಕೊಂಡೆನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಸೊಲೊಮೋನನು ಶಿಮ್ಮಿಯನ್ನು ಕರೆಯಿಸಿ, “ನೀನು ಜೆರುಸಲೇಮನ್ನು ಬಿಟ್ಟುಹೋದರೆ ಮರಣಶಿಕ್ಷೆಯಾಗುವುದೆಂದು ನಾನು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದೆನು. ನೀನು ಬೇರೆಲ್ಲಾದರೂ ಹೋದರೆ ಅದು ನಿನ್ನ ಸ್ವಂತ ತಪ್ಪಾಗುವುದೆಂದೂ ನಿನ್ನನ್ನು ಕೊಲ್ಲಲಾಗುವುದೆಂದೂ ನಾನು ನಿನ್ನನ್ನು ಎಚ್ಚರಿಸಿದ್ದೆನು. ಅದಕ್ಕೆ ನೀನೂ ಒಪ್ಪಿಗೆ ನೀಡಿ ನನಗೆ ವಿಧೇಯನಾಗಿರುವುದಾಗಿ ತಿಳಿಸಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:42
6 ತಿಳಿವುಗಳ ಹೋಲಿಕೆ  

ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ಶಿಮ್ಮಿ ಜೆರುಸಲೇಮಿನಿಂದ ಗತ್ ಊರಿಗೆ ಹೋಗಿ ಬಂದದ್ದು ಅರಸ ಸೊಲೊಮೋನನಿಗೆ ತಿಳಿಯಿತು. ಅವನು ಶಿಮ್ಮಿಯನ್ನು ಕರೆಯಿಸಿ,


ಹಾಗಾದರೆ, ಸರ್ವೇಶ್ವರನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ಏಕೆ ಕೈಗೊಳ್ಳಲಿಲ್ಲ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು