Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:44 - ಕನ್ನಡ ಸತ್ಯವೇದವು C.L. Bible (BSI)

44 ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇದಲ್ಲದೆ ಅರಸನು ಅವನಿಗೆ - ನೀನು ನನ್ನ ತಂದೆಯಾದ ದಾವೀದನಿಗೆ ವಿರೋಧವಾಗಿ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಆ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:44
14 ತಿಳಿವುಗಳ ಹೋಲಿಕೆ  

“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.


ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.


ಧರ್ಮಶಾಸ್ತ್ರದ ವಿಧಿನಿಯಮಗಳು ಅವರ ಹೃದಯಗಳಲ್ಲಿ ಲಿಖಿತವಾಗಿವೆಯೆಂದು ಅವರ ನಡತೆಯಿಂದಲೇ ವೇದ್ಯವಾಗುತ್ತದೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಹಾಗಾದರೆ, ಸರ್ವೇಶ್ವರನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ಏಕೆ ಕೈಗೊಳ್ಳಲಿಲ್ಲ?” ಎಂದನು.


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.


ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.


ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು