Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:1 - ಕನ್ನಡ ಸತ್ಯವೇದವು C.L. Bible (BSI)

1 ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:1
28 ತಿಳಿವುಗಳ ಹೋಲಿಕೆ  

ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.


ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.


ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.


ಆಗ ದಮಸ್ಕದ ಕೋಟೆಯಲ್ಲಿ ಬೆಂಕಿ ಹೊತ್ತಿಸುವೆನು. ಅದು ಬೆನ್‍ಹದದನ ಅರಮನೆಗಳನ್ನು ದಹಿಸಿಬಿಡುವುದು. ಇದು ಸರ್ವಶಕ್ತ ಸರ್ವೇಶ್ವರನಾದ ನನ್ನ ನುಡಿ.”


ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ


“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ,


ನೀವು ಆಯಾ ಸ್ಥಳಗಳಲ್ಲಿರುವ ರಾಜರನ್ನು ತೆಗೆದುಹಾಕಿ, ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸಿರಿ.


ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.


ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನು ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು.


ಆ ಪಟ್ಟಣದಲ್ಲಿದ್ದ ಇಸ್ರಯೇಲರ ಅರಸ ಅಹಾಬನ ಬಳಿಗೆ ದೂತರನ್ನು ಕಳುಹಿಸಿದನು.


ಸಿರಿಯಾದ ರಾಜನು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತುಮಾಡುತ್ತಿದ್ದನು.


ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ, ಜೀವದಾನಹೊಂದಿದ ಹುಡುಗನ ತಾಯಿ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ಅರಸರೇ, ನನ್ನ ಒಡೆಯರೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆ ಇವನ ತಾಯಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು