Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:11 - ಕನ್ನಡ ಸತ್ಯವೇದವು C.L. Bible (BSI)

11 ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರ ಅರಸನು ಬಂದ ದೂತರಿಗೆ - ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:11
12 ತಿಳಿವುಗಳ ಹೋಲಿಕೆ  

ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.


ಅರಸುಗಳು ತಮಗೆ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆಂಬುದನ್ನು ಮೋವಾಬ್ಯರು ಕೇಳಿದರು. ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಗೆ ಬಂದರು.


ಅದರ ಮೇಲೆ ಒಮ್ಮೆ ಕೈಹಾಕಿ ನೋಡು! ಆಗ ನಡೆಯಬಹುದಾದ ಕದನವನು ನೆನೆಸಿಕೊಂಡರೆ ಸಾಕು! ನೀನು ಮತ್ತೆ ಮುಟ್ಟಹೋಗಲಾರೆ ಅದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು