Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:23 - ಕನ್ನಡ ಸತ್ಯವೇದವು C.L. Bible (BSI)

23 ಸಿರಿಯಾದವರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಯೇಲರ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು; ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಖಂಡಿತವಾಗಿ ಜಯಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ - ಇಸ್ರಾಯೇಲ್ಯರ ದೇವರು ಬೆಟ್ಟಗಳ ದೇವರಾಗಿರುವದರಿಂದ ಅವರು ನಮ್ಮನ್ನು ಸೊಲಿಸಿದರು; ನಾವು ಅವರೊಡನೆ ಬೈಲಿನಲ್ಲಿ ಯುದ್ಧಮಾಡುವದಾದರೆ ಹೇಗೂ ಜಯಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:23
13 ತಿಳಿವುಗಳ ಹೋಲಿಕೆ  

ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ನನ್ನ ತಂದೆತಾತಂದಿರು ಗೋಜಾನ್, ಖಾರನ್, ರೆಚೆಫ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ?


ನೀವು ಆಯಾ ಸ್ಥಳಗಳಲ್ಲಿರುವ ರಾಜರನ್ನು ತೆಗೆದುಹಾಕಿ, ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸಿರಿ.


ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು.


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು