Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:26 - ಕನ್ನಡ ಸತ್ಯವೇದವು C.L. Bible (BSI)

26 ಒಂದು ವರ್ಷ ದಾಟಿದನಂತರ ಬೆನ್ಹದದನು ಸಿರಿಯಾದವರನ್ನು ಕೂಡಿಸಿಕೊಂಡು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಅಫೇಕಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಂದು ವರುಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:26
10 ತಿಳಿವುಗಳ ಹೋಲಿಕೆ  

“ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು.


ಆಗ ಆ ಪ್ರವಾದಿ ಮತ್ತೆ ಇಸ್ರಯೇಲರ ಅರಸನ ಬಳಿಗೆ ಬಂದನು. “ಸಿರಿಯಾದವರ ಅರಸನು ಮುಂದಿನ ವರ್ಷ ಇನ್ನೊಮ್ಮೆ ನಿನ್ನ ಮೇಲೆ ದಾಳಿಮಾಡಬರುವನು; ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಪರ್ಯಾಲೋಚಿಸು,” ಎಂದು ಎಚ್ಚರಿಸಿದನು.


ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.


ಆಶೇರ್ಯ ಕುಲದವರು ಆಕ್ಕೋ, ಚೀದೋನ್, ಆಹ್ಲಾಬ್, ಅಕ್ಜೀಬ್, ಹೆಲ್ಬಾ, ರೆಹೋಬ್ ಎಂಬ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿಲ್ಲ;


ಉಮ್ಮಾ, ಅಫೇಕ್, ರೆಹೂಬ್ ಇವೇ ಮೊದಲಾದ ಇಪ್ಪತ್ತೆರಡು ನಗರಗಳೂ ಅವುಗಳ ಗ್ರಾಮಗಳೂ


ಗೆಷೂರ್ಯರ ನಾಡು, ದಕ್ಷಿಣದಲ್ಲಿದ್ದ ಅವ್ವೀಯರ ನಾಡು; ಸಿದೋನ್ಯರಿಗೆ ಸೇರಿದ ಮೆಯರಾದಿಂದ ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ನಾಡು;


ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು.


ನಮ್ಮ ಸೈನ್ಯದಿಂದ ನಷ್ಟವಾಗಿಹೋದಷ್ಟು ಜನರನ್ನೂ ಕುದುರೆಗಳನ್ನೂ ರಥಗಳನ್ನೂ ಮತ್ತೆ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ; ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ,” ಎಂದು ಹೇಳಿದರು. ಅವನು ಅದರ ಅಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು