Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:29 - ಕನ್ನಡ ಸತ್ಯವೇದವು C.L. Bible (BSI)

29 ಈ ಎರಡು ಸೈನ್ಯಗಳೂ ಏಳುದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು; ಏಳನೆಯ ದಿನದಲ್ಲಿ ಯುದ್ಧಪ್ರಾರಂಭವಾಯಿತು. ಇಸ್ರಯೇಲರು ಆ ಒಂದೇ ದಿನದಲ್ಲಿ ಸಿರಿಯಾದವರ ಒಂದು ಲಕ್ಷಮಂದಿ ಕಾಲಾಳುಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ಎರಡು ಸೈನ್ಯಗಳೂ ಏಳು ದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲ್ಯರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಳು ದಿವಸ ಎರಡು ಸೈನ್ಯಗಳೂ ಎದುರುಬದುರಾಗಿ ದಂಡಿಳಿದಿದ್ದರು. ಆದರೆ ಏಳನೆಯ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ, ಇಸ್ರಾಯೇಲರು ಅರಾಮ್ಯರಲ್ಲಿ ಲಕ್ಷಮಂದಿ ಕಾಲಾಳುಗಳನ್ನು ಒಂದೇ ದಿವಸದಲ್ಲಿ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:29
13 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II


ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸದೆಬಡಿದರು. ಇಸ್ರಯೇಲ್ ಯೋಧರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ .


ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.


ಆ ಫಿಲಿಷ್ಟಿಯನು ನಾಲ್ವತ್ತು ದಿನ, ಬೆಳಿಗ್ಗೆ ಸಂಜೆ, ಒಂದೇ ಸಮನೆ ಸವಾಲು ಹಾಕುತ್ತಾ ಇದ್ದನು.


ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ನಗರವನ್ನು ಏಳುಸಾರಿ ಸುತ್ತಿದರು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


“ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು.


ಯೆಹೋವಾಹಾಜನ ಮಗ ಯೋವಾಷನು, ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು, ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು