Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:40 - ಕನ್ನಡ ಸತ್ಯವೇದವು C.L. Bible (BSI)

40 ನಾನು ಬೇರೆ ಕೆಲಸದಲ್ಲಿದ್ದಾಗ ಆ ವ್ಯಕ್ತಿ ತಪ್ಪಿಸಿಕೊಂಡು ಹೋದನು,” ಎಂದು ಮೊರೆಯಿಟ್ಟನು. ಇಸ್ರಯೇಲರ ಅರಸನು ಇವನಿಗೆ, “ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೇ?’ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು ಎಂದು ಮೊರೆಯಿಟ್ಟನು. ಇಸ್ರಾಯೇಲ್ಯರ ಅರಸನು ಇವನಿಗೆ - ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೋ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನಾನು ಇತರ ಕೆಲಸಗಳಲ್ಲಿ ನಿರತನಾಗಿದ್ದಾಗ, ಆ ಮನುಷ್ಯನು ಓಡಿಹೋದನು” ಎಂದು ಹೇಳಿದನು. ಇಸ್ರೇಲಿನ ರಾಜನು, “ಆ ಸೈನಿಕನು ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟ ನೀನು ನಿನ್ನನ್ನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವೆ. ಆದ್ದರಿಂದ, ಅದರ ಪರಿಹಾರವೂ ನಿನಗೆ ತಿಳಿದಿದೆ. ಆ ಮನುಷ್ಯನೇನು ಹೇಳಿದನೊ ಅದನ್ನು ನೀನು ಮಾಡಲೇಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:40
10 ತಿಳಿವುಗಳ ಹೋಲಿಕೆ  

ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ನಾನಲ್ಲ, ನಿನ್ನ ಬಾಯೇ, ನಿನ್ನನು ಅಪರಾಧಿಯನ್ನಾಗಿಸುತ್ತಿದೆ ನಿನ್ನ ತುಟಿಗಳೇ ನಿನಗೆ ವಿರುದ್ಧ ಸಾಕ್ಷಿಕೊಡುತ್ತಿವೆ.


ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು:


ಅರಸನು ಹಾದುಹೋಗುವಾಗ ಅವನಿಗೆ, “ನಿಮ್ಮ ಸೇವಕನಾದ ನಾನು ಯುದ್ಧಕ್ಕೆ ಹೋಗಿದ್ದಾಗ ರಣರಂಗದಲ್ಲಿ ಒಬ್ಬನು, ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ನಿನ್ನ ಪ್ರಾಣವು ನನ್ನದಾಗಿರುವುದು; ಇಲ್ಲವೆ ನೀನು ನನಗೆ ಮೂರು ಸಾವಿರ ಬೆಳ್ಳಿನಾಣ್ಯವನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.


ಕೂಡಲೆ ಆ ಪ್ರವಾದಿ ಕಣ್ಣುಗಳ ಮೇಲಿನಿಂದ ರುಮಾಲನ್ನು ತೆಗೆದನು. ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಯೇಲರ ಅರಸನಿಗೆ ಗೊತ್ತು ಆಯಿತು.


ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!


ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು