Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ನಿನ್ನನ್ನು ಕುರಿತು - ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಯೆಹೋವನು ನಿನಗೆ, ‘ನಾನು ನಿನ್ನನ್ನು ನಾಶಪಡಿಸುತ್ತೇನೆ. ನಿನ್ನನ್ನು ಮತ್ತು ನಿನ್ನ ಕುಟುಂಬದ ಪ್ರತಿಯೊಬ್ಬ ಗಂಡಸರನ್ನು ನಾನು ಕೊಂದುಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:21
15 ತಿಳಿವುಗಳ ಹೋಲಿಕೆ  

ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.


“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.


ಸರ್ವೇಶ್ವರ ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಕೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದೆ. ಆದುದರಿಂದ ನಿನ್ನ ಸಂತಾನದವರು ನಾಲ್ಕೆನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಹೇಳಿದರು.


ಸಮಾರಿಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ನೆರವೇರಿತು.


ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ಖಂಡಿತವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಖಂಡಿತವಾಗಿ ಉಳಿಯುತ್ತಿರಲಿಲ್ಲ!” ಎಂದು ಹೇಳಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದ್ದರಿಂದ ಹೀಗಾಯಿತು.


ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು