Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:4 - ಕನ್ನಡ ಸತ್ಯವೇದವು C.L. Bible (BSI)

4 ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಪಿತ್ರಾರ್ಜಿತಸ್ವಾಸ್ತ್ಯವನ್ನು ನಿನಗೆ ಕೊಡುವದಿಲ್ಲವೆಂದು ನಾಬೋತನು ಹೇಳಿದದರಿಂದ ಅಹಾಬನು ಸಿಟ್ಟಿನಿಂದ ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. “ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು. ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:4
21 ತಿಳಿವುಗಳ ಹೋಲಿಕೆ  

ಇಸ್ರಯೇಲರ ಅರಸನು ಸಿಟ್ಟಿನಿಂದ, ಗಂಟುಮೋರೆ ಮಾಡಿಕೊಂಡು, ಸಮಾರಿಯದಲ್ಲಿ ಇದ್ದ ತನ್ನ ಮನೆಗೆ ಹೋದನು.


ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ.


ಸೈತಾನನಿಗೆ ಅವಕಾಶ ಕೊಡಬೇಡಿ.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಸರ್ವೇಶ್ವರಸ್ವಾಮಿಯ ವರ್ತನೆಯು ಯೋನನಿಗೆ ಹಿಡಿಸಲಿಲ್ಲ. ಅವನ ಕೋಪ ನೆತ್ತಿಗೇರಿತು.


ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.


ಅವನು ಒಂದು ದಿನ ಅಮ್ನೋನನನ್ನು, “ರಾಜಪುತ್ರರೇ, ನೀವು ದಿನೇದಿನೇ ಕ್ಷೀಣವಾಗುತ್ತಾ ಬರುವುದೇಕೆ? ನನಗೆ ತಿಳಿಸಬಾರದೇ?,” ಎಂದು ಕೇಳಿದನು. ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ,” ಎಂದು ಉತ್ತರಕೊಟ್ಟನು.


ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆ ಕನ್ಯೆ ಆಗಿದ್ದುದರಿಂದ ಆಕೆಗೆ ಏನು ಮಾಡುವುದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು.


ಅವನು, “ಒಲ್ಲೆ; ಊಟಮಾಡುವುದಿಲ್ಲ,” ಎಂದನು. ಆದರೆ, ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡಿದ್ದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು.


ಆದರೂ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಿಲಿನಲ್ಲಿ ತನ್ನ ಕಣ್ಣೆದುರು ಕುಳಿತಿರುವವರೆಗೂ ತನಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದನು.


ಅದಕ್ಕೆ ಸರ್ವೇಶ್ವರ, “ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?” ಎಂದರು.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು