Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:8 - ಕನ್ನಡ ಸತ್ಯವೇದವು C.L. Bible (BSI)

8 ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು ಅದಕ್ಕೆ ಅವನ ಮುದ್ರೆಹಾಕಿ ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:8
18 ತಿಳಿವುಗಳ ಹೋಲಿಕೆ  

ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.


ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು:


ಅಷ್ಟುಮಾತ್ರವಲ್ಲ, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ನಿಂದಿಸಿ ದೂಷಿಸುವುದಕ್ಕಾಗಿ ‘ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು’ ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದ್ದನು.


ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.


ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.


ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಅಷ್ಟರಲ್ಲಿ, ಬೋವಜನು ಮುಂಚೆ ಹೇಳಿದ್ದ ಎಲಿಮೆಲೆಕನಿಗೆ ಹತ್ತಿರದ ನೆಂಟನಾಗಿದ್ದವನು ಅಲ್ಲಿಗೆ ಬಂದನು. ಆಗ ಬೋವಜನು ಅವನಿಗೆ: “ಬಾರಪ್ಪಾ, ಇಲ್ಲಿ ಕುಳಿತುಕೊ,” ಎಂದು ಕರೆಯಲು, ಅವನು ಬಂದು ಪಕ್ಕದಲ್ಲೇ ಕುಳಿತುಕೊಂಡನು.


ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ;


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು