Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:11 - ಕನ್ನಡ ಸತ್ಯವೇದವು C.L. Bible (BSI)

11 ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಹೀಗೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:11
20 ತಿಳಿವುಗಳ ಹೋಲಿಕೆ  

ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


“ಇದು ಸರ್ವೇಶ್ವರನ ನುಡಿ - ನೊಗವನ್ನೂ ಕಣ್ಣಿಗಳನ್ನೂ ಮಾಡಿ ನಿನ್ನ ಹೆಗಲಿಗೆ ಹಾಕಿಕೊ.


ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಇದು ಸರ್ವೇಶ್ವರನ ನುಡಿ’ ಎಂದು ಹೇಳುವ ಪ್ರವಾದಿಗಳನ್ನು ನಾನು ಪ್ರತಿಭಟಿಸುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗಿ; ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು