Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣಮಾಡಿಸಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣಮಾಡಿಸಬೇಕು ಅನ್ನಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:16
14 ತಿಳಿವುಗಳ ಹೋಲಿಕೆ  

“ದೆವ್ವಬಿಡಿಸುವವರು” ಎನಿಸಿಕೊಂಡು ಊರೂರು ಸುತ್ತುತ್ತಿದ್ದ ಕೆಲವು ಯೆಹೂದ್ಯರು ಸಹ ಪ್ರಭು ಯೇಸುವಿನ ನಾಮವನ್ನು ಬಳಸಿ ದೆವ್ವಬಿಡಿಸಲು ಯತ್ನಿಸಿದರು. ಇವರು ದೆವ್ವಗಳಿಗೆ, “ಪೌಲನು ಸಾರುತ್ತಿರುವ ಯೇಸುವಿನ ನಾಮದಲ್ಲಿ ನಿಮಗೆ ಆಣೆಯಿಟ್ಟು ಆಜ್ಞಾಪಿಸುತ್ತೇವೆ,” ಎಂದು ಹೇಳುತ್ತಿದ್ದರು.


“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.


ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ.


ಅದೇ ಸಮಯಕ್ಕೆ ಯೆಹೋಶುವನು ಇಸ್ರಯೇಲರಿಂದ ಪ್ರಮಾಣ ಮಾಡಿಸಿ ಅವರಿಗೆ, “ಜೆರಿಕೋ ಎಂಬ ಈ ನಗರವನ್ನು ಕಟ್ಟುವುದಕ್ಕೆ ಕೈಹಾಕುವವನು ಸರ್ವೇಶ್ವರನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ! ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ,” ಎಂದು ಹೇಳಿದನು.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.


ಅದಕ್ಕೆ ಬಿಳಾಮನು, “ಅದಿರಲಿ, ನಾನೀಗ ಬಂದಾಯಿತು, ಆದರೆ ನಾನಾಗಿ ಏನನ್ನು ಹೇಳುವ ಶಕ್ತಿ ನನಗಿಲ್ಲ, ದೇವರು ಆಡಿಸಿದ ಮಾತನ್ನೇ ಹೇಳಲು ಸಾಧ್ಯ,” ಎಂದು ಹೇಳಿದನು.


ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು