Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:46 - ಕನ್ನಡ ಸತ್ಯವೇದವು C.L. Bible (BSI)

46 ಇವನು ತನ್ನ ತಂದೆ ಆಸನ ಕಾಲದಲ್ಲಿ ತಪ್ಪಿಸಿಕೊಂಡ ಹೆಣ್ಣು-ಗಂಡು ವೇಶ್ಯೆಯರನ್ನು ನಾಡಿನಿಂದ ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಇವನು ತನ್ನ ತಂದೆಯಾದ ಆಸನ ಕಾಲದಲ್ಲಿ ತಪ್ಪಿಸಿಕೊಂಡ ದೇವದಾಸ ದೇವದಾಸಿಯರನ್ನು ದೇಶದಿಂದ ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಲೈಂಗಿಕ ಸಂಬಂಧಕ್ಕಾಗಿ ತಮ್ಮ ದೇಹಗಳನ್ನು ಮಾರಾಟ ಮಾಡುತ್ತಿದ್ದ ಗಂಡಸರನ್ನು ಮತ್ತು ಹೆಂಗಸರನ್ನು, ಯೆಹೋಷಾಫಾಟನು ದೇಶದಿಂದ ಹೊರಗಟ್ಟಿದನು. ಅವನ ತಂದೆಯಾದ ಆಸನು ರಾಜನಾಗಿದ್ದ ಕಾಲದಲ್ಲಿ ಆ ಜನರು ಪೂಜಾಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:46
10 ತಿಳಿವುಗಳ ಹೋಲಿಕೆ  

ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


ಇದಲ್ಲದೆ, ಅವರ ನಾಡಿನಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿದ್ದ ಗಂಡಸರೂ ಹೆಂಗಸರೂ ಇದ್ದರು. ಅವರ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳ ದುರಾಚಾರಗಳನ್ನೆಲ್ಲಾ ಅವರೂ ನಡೆಸುತ್ತಿದ್ದರು.


“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಅಲ್ಲದೆ ಲೋಟನಿಗೆ, "ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


ರೆಹಬ್ಬಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು