Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:48 - ಕನ್ನಡ ಸತ್ಯವೇದವು C.L. Bible (BSI)

48 ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:48
18 ತಿಳಿವುಗಳ ಹೋಲಿಕೆ  

ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.


ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚಿನ ಬಂಗಾರವನ್ನು ತೆಗೆದುಕೊಂಡು ಬಂದರು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.


ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II


ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II


ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.


ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.


ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.


ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು.


ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು