Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:6
22 ತಿಳಿವುಗಳ ಹೋಲಿಕೆ  

ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವನು “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶವಾಗುವರು,” ಎಂದು ಹೇಳಿದನು.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.


ಮಾತ್ರವಲ್ಲ, “ಸರ್ವೇಶ್ವರನ ಸನ್ನಿಧಿಯಲ್ಲಿ ಈಗಲೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಬೇಡಿಕೊಂಡನು.


ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು. ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.


ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.


ಆದುದರಿಂದ ನೀವು ಬಾಳ್ ದೇವತೆಯ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿ; ನಾನು ಬಾಳ್ ದೇವತೆಗಾಗಿ ಮಹಾಬಲಿಯನ್ನು ಸಮರ್ಪಿಸಬೇಕೆಂದಿರುತ್ತೇನೆ. ಆದುದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು, ಬಾರದವನು ಸಾಯಬೇಕು,” ಎಂದು ಹೇಳಿದನು. ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.


ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.


ನನ್ನ ತಂದೆ ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.


ಅಹಾಬನು ಇಸ್ರಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು