Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:2 - ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿಯವರೆಗೂ ಸರ್ವೇಶ್ವರಸ್ವಾಮಿಯ ನಾಮಕ್ಕೋಸ್ಕರ ಆಲಯವೇ ಇರಲಿಲ್ಲ. ಆದುದರಿಂದ ಜನರು ಪೂಜಾಸ್ಥಳಗಳಲ್ಲಿ ಬಲಿಯರ್ಪಣೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆವರೆಗೂ ಯೆಹೋವನಾಮಕ್ಕೋಸ್ಕರ ಆಲಯವಿರಲಿಲ್ಲವಾದದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವಾಲಯದ ನಿರ್ಮಾಣವು ಇನ್ನೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಕಾಲದವರೆಗೂ ಯೆಹೋವ ದೇವರ ಹೆಸರಿಗಾಗಿ ಆಲಯ ಇರಲಿಲ್ಲ. ಆದುದರಿಂದ, ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:2
17 ತಿಳಿವುಗಳ ಹೋಲಿಕೆ  

ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.


ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


“ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ.


“ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ದಹನಬಲಿಗಳನ್ನು ಸಮರ್ಪಿಸಬಾರದು. ಎಚ್ಚರಿಕೆ!


“ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.


ಇವನು ಇಸ್ರಯೇಲರ ಅರಸನೊಡನೆ ಸಮಾಧಾನದಿಂದಿದ್ದನು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು