Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:4 - ಕನ್ನಡ ಸತ್ಯವೇದವು C.L. Bible (BSI)

4 ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಸನಾದ ಸೊಲೊಮೋನನು ಯಜ್ಞಮಾಡುವದಕ್ಕೋಸ್ಕರ ಪೂಜಾಸ್ಥಳಗಳಲ್ಲಿ ವಿಶೇಷವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:4
18 ತಿಳಿವುಗಳ ಹೋಲಿಕೆ  

ಅರಸ ಸೊಲೊಮೋನನು ಬಲಿಯಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ದೇವಾಲಯವನ್ನು ಪ್ರತಿಷ್ಠಿಸಿದರು.


ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.


ಯಾಜಕ ಚಾದೋಕ ಮತ್ತು ಅವನ ಜೊತೆ ಯಾಜಕರು ಗಿಬ್ಯೋನಿನಲ್ಲಿದ್ದ ಸರ್ವೇಶ್ವರನ ಗುಡಾರದಲ್ಲಿ ಆರಾಧನೆಯನ್ನು ನಡೆಸಲು ನೇಮಕರಾಗಿದ್ದರು.


ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.


ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ.


ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.


ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು.


ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.


ಅನಂತರ ಸರ್ವೇಶ್ವರ, ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು.


ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ,


ಆಗ ಸೌಲನು ಜನರಿಂದ ದಹನಬಲಿಗೆ ಹಾಗು ಶಾಂತಿಸಮಾಧಾನ ಬಲಿಗೆ ಬೇಕಾದದ್ದನ್ನು ತರಿಸಿ ದಹನಬಲಿಯನ್ನು ಅರ್ಪಿಸಿದನು.


ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.


ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -


ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು