Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:21 - ಕನ್ನಡ ಸತ್ಯವೇದವು C.L. Bible (BSI)

21 ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:21
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲ್ಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ರಾಜರಿಗೂ ಅಧಿಪತಿಯಾಗಿದ್ದನು. ಸುತ್ತಮುತ್ತಲಿನ ರಾಜರೊಡನೆ ಶಾಂತಿಸಮಾಧಾನದಿಂದಿದ್ದನು.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಅನೇಕರು ಸರ್ವೇಶ್ವರನಿಗೆ ಕಾಣಿಕೆಗಳನ್ನೂ ಜುದೇಯದ ಅರಸ ಹಿಜ್ಕೀಯನಿಗೆ ಶ್ರೇಷ್ಠವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲ ರಾಷ್ಟ್ರಗಳವರು ಹಿಜ್ಕೀಯನನ್ನು ಮಹಾನ್‍ವ್ಯಕ್ತಿಯೆಂದು ಸನ್ಮಾನಿಸುತ್ತಿದ್ದರು.


ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.


ನೀವು ಹೆಜ್ಜೆಯಿಡುವ ಎಲ್ಲ ಸ್ಥಳಗಳೂ ನಿಮ್ಮದಾಗುವುವು; ಮರುಭೂಮಿ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ನಾಡು ವ್ಯಾಪಿಸುವುದು.


ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.


ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.


ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗಿದ್ದ ಆಹಾರಪದಾರ್ಥಗಳ ಪಟ್ಟಿ: ಐದು ಸಾವಿರ ಲೀಟರ್ ಗೋದಿಯ ಹಿಟ್ಟು, ಹತ್ತು ಸಾವಿರ ಲೀಟರ್ ಜವೆಗೋದಿಯ ಹಿಟ್ಟು;


“ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಭಾರವನ್ನು ಹಗುರಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ,” ಎಂದನು.


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.


ದೇವರಿಲ್ಲದೆ ಯಾರಿಗೆ ಊಟ ದೊರಕೀತು? ಅವರಿಲ್ಲದೆ ಸುಖಾನುಭವ ಯಾರಿಗೆ ದೊರಕೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು