Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:25 - ಕನ್ನಡ ಸತ್ಯವೇದವು C.L. Bible (BSI)

25 ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:25
14 ತಿಳಿವುಗಳ ಹೋಲಿಕೆ  

ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು