Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:5 - ಕನ್ನಡ ಸತ್ಯವೇದವು C.L. Bible (BSI)

5 ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾತಾನನ ಮಗನಾದ ಅಜರ್ಯನು ಪ್ರದೇಶಾಧಿಪತಿಗಳ ಮುಖ್ಯಸ್ಥನು; ನಾತಾನನ ಮಗನಾದ ಜಾಬೂದನು ಯಾಜಕನೂ ಅರಸನ ವಿುತ್ರನೂ ಆಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:5
17 ತಿಳಿವುಗಳ ಹೋಲಿಕೆ  

ಅಹೀತೋಫೆಲನು ಅರಸನ ಮಂತ್ರಿ; ಅಕೀರ್ಯನಾದ ಹೂಷೈಯು ಅವನ ಮಿತ್ರ;


ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು.


ಅಬ್ಷಾಲೋಮನು ಜೆರುಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಪಟ್ಟಣಕ್ಕೆ ಬಂದನು.


ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.


ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,


ಸವಿಮಾತಿನಿಂದ ಅರಸನ ಗೆಳೆತನ ಪಡೆಯಬಹುದು; ಸರ್ವೇಶ್ವರ ಬಯಸುವುದು ಅಂತರಂಗ ಶುದ್ಧಿಯನ್ನು.


ಸರ್ವ ಇಸ್ರಯೇಲರ ಮೇಲೆ ಸೊಲೊಮೋನನು ಹನ್ನೆರಡು ಜನ ಜಿಲ್ಲಾಧಿಕಾರಿಗಳನ್ನು ನೇಮಿಸಿದ್ದನು. ಅವರು ತಮ್ಮ ಜಿಲ್ಲೆಗಳಿಂದ ಅರಸನಿಗೂ ಅರಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದರು. ಪ್ರತಿಯೊಬ್ಬನೂ ವರ್ಷದಲ್ಲಿ ಒಂದೊಂದು ತಿಂಗಳು ಪೂರೈಸಬೇಕಾಗಿತ್ತು.


ಯಾಯೀರಿನವನಾದ ಈರನೂ ದಾವೀದನ ಯಾಜಕನು.


ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.


ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.


ಅಹೀಷಾರನು - ರಾಜ್ಯಗೃಹಾಧಿಪತಿ; ಅಬ್ದನ ಮಗನಾದ ಅದೋನೀರಾಮನು - ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥ.


ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಇವು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು