Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:17 - ಕನ್ನಡ ಸತ್ಯವೇದವು C.L. Bible (BSI)

17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು, ಸೊಲೊಮೋನನ ಅಪ್ಪಣೆಯಂತೆ, ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೊರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡಕಲ್ಲುಗಳನ್ನು ಕೊರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:17
10 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.


ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತುಗೋಡೆಯನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತುಗೋಡೆಯನ್ನೂ ಅಸ್ತಿವಾರದ ಮೇಲಿನಿಂದ ಕಡೇ ವರಸೆಯವರೆಗೆ, ಅಳತೆಯ ಮೇರೆಗೆ ಕೆತ್ತಲ್ಪಟ್ಟಂಥ, ಎರಡು ಮಗ್ಗಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ, ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿದನು.


“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?


ಅವರನು ಹೊಡೆದೆ ಮತ್ತೆ ಏಳದಂತೆ ಅವರನು ಮಾಡಿದೆ ಕಾಲಿಗೆ ಬೀಳುವಂತೆ.


ಆದರೆ ಸರ್ವೇಶ್ವರ ನನಗೆ, “ನೀನು ಬಹಳ ರಕ್ತವನ್ನು ಸುರಿಸಿದವನು; ಮಹಾಯುದ್ಧಗಳನ್ನು ನಡೆಸಿದವನು. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ, ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು