Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:4 - ಕನ್ನಡ ಸತ್ಯವೇದವು C.L. Bible (BSI)

4 ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಈಗ ನನ್ನ ದೇವರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:4
11 ತಿಳಿವುಗಳ ಹೋಲಿಕೆ  

ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲ್ಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ರಾಜರಿಗೂ ಅಧಿಪತಿಯಾಗಿದ್ದನು. ಸುತ್ತಮುತ್ತಲಿನ ರಾಜರೊಡನೆ ಶಾಂತಿಸಮಾಧಾನದಿಂದಿದ್ದನು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II


“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?


ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ-ನಗರಗಳು; ಗಾಜಾ ಸಂಸ್ಥಾನ ಹಾಗೂ ಈಜಿಪ್ಟಿನ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲ ಗ್ರಾಮ, ನಗರಗಳು.


ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕೆ ಬೇಕಾದ ಕಲ್ಲು, ಮರಗಳನ್ನು ಸಿದ್ಧಪಡಿಸಿದವರು ಇವರೇ.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಯೇಲರಿಗೆ ಮಹಾಬಾಧಕನಾದ ಹದದನ ಜೊತೆಗೆ ಇವನೂ ವೈರಿಯಾಗಿದ್ದನು. ಇವನು ಸಿರಿಯಾ ದೇಶದಲ್ಲಿ ಅರಸನಾಗಿ ಇಸ್ರಯೇಲರನ್ನು ಬಹಳವಾಗಿ ದ್ವೇಷಿಸಿದನು.


ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು