Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ (ವೈಶಾಖ) ತಿಂಗಳಲ್ಲಿ ಆರಂಭಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಬಂದ ನಾನೂರ ಎಂಬತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋನನ ಆಳಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಾದ ಜಿವ್ ತಿಂಗಳಲ್ಲಿ ಅವನು ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:1
26 ತಿಳಿವುಗಳ ಹೋಲಿಕೆ  

ಸಾಕ್ಷಾತ್ ಆ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”


ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತು.


ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.


ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.


ಇಸ್ರಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲೂ ಅವುಗಳ ಗ್ರಾಮಗಳಲ್ಲೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲೂ ವಾಸಿಸುತ್ತಿದ್ದಾರಲ್ಲವೆ? ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.


ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್.


ಜೆರುಸಲೇಮಿನಲ್ಲಿ ಅರಸ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಸೇವೆಮಾಡಿದವರು: ಅಜರ್ಯ,


ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು.


ನಿರ್ಮಿಸಿದನು ತನ್ನ ಮಂದಿರವನು ಪರ್ವತದಂತೆ I ಶಾಶ್ವತವಾಗಿ ತಾನು ಸ್ಥಾಪಿಸಿದ ಭೂಮಿಯಂತೆ II


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಅವನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದ ಇಪ್ಪತ್ತೇಳು ಮೀಟರ್ ಹಾಗೂ ಅಗಲ ಒಂಬತ್ತು ಮೀಟರ್.


ಆಮೇಲೆ ಆ ಪುರುಷ ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಮೂರು ಮೂರು ಮೀಟರ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು