Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:7 - ಕನ್ನಡ ಸತ್ಯವೇದವು C.L. Bible (BSI)

7 ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದ್ದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:7
14 ತಿಳಿವುಗಳ ಹೋಲಿಕೆ  

ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು.


ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ.


ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗೆಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರಮಾಡಬಲ್ಲದು.


ಕೆಳಗಿನ ಕೊಠಡಿಗಳ ಅಗಲ 2:2 ಮೀಟರ್; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲ 2:7 ಮೀಟರ್; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲ 3:1 ಮೀಟರ್. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದು ಎಂದು ಗೋಡೆಯ ಹೊರ ಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.


ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು