Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:27 - ಕನ್ನಡ ಸತ್ಯವೇದವು C.L. Bible (BSI)

27 ಇದಲ್ಲದೆ, ಹೀರಾಮನು ಹತ್ತು ಕಂಚಿನ ಪೀಠಗಳನ್ನು ಮಾಡಿದನು. ಪ್ರತಿಯೊಂದು 1:8 ಮೀಟರ್ ಉದ್ದ, 1:8 ಮೀಟರ್ ಅಗಲ, 1:3 ಮೀಟರ್ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಪ್ರತಿಯೊಂದರ ಉದ್ದ ಆರು ಅಡಿಗಳು; ಅಗಲ ಆರು ಅಡಿಗಳು; ಮತ್ತು ಎತ್ತರ ನಾಲ್ಕುವರೆ ಅಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಹತ್ತು ಕಂಚಿನ ಚಲಿಸುವ ಪೀಠಗಳನ್ನು ಮಾಡಿದನು. ಒಂದೊಂದು ಪೀಠವು 1.8 ಮೀಟರ್ ಉದ್ದವೂ, 1.8 ಮೀಟರ್ ಅಗಲವೂ, 1.4 ಮೀಟರ್ ಎತ್ತರವೂ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:27
10 ತಿಳಿವುಗಳ ಹೋಲಿಕೆ  

ಅವುಗಳ ಮೇಲಣ ಬಾನೆಗಳು, ಕಡಲಕೊಳ ಎನಿಸಿಕೊಳ್ಳುವ ಎರಕದ ಪಾತ್ರೆ,


ಬಾಬಿಲೋನಿಯದವರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ, ಕಡಲಿನ ಆಕಾರದ ಕಂಚಿನ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.


ಬಾಬಿಲೋನಿಯರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ ಕಂಚಿನ ಕಡಲೆಂಬ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.


ಅರಸ ಸೊಲೊಮೋನನು ಸರ್ವೇಶ್ವರನಾಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಂಚಿನ ಕಡಲೆಂಬ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಡಲಿನ ಆಕಾರದ ಪಾತ್ರೆ, ಚಕ್ರದ ಬಂಡಿಗಳು ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.


ಇದಲ್ಲದೆ ಹೀರಾಮನು 800 ಲೀಟರ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಬಾನೆಗಳನ್ನು ಮಾಡಿ ಪ್ರತಿ ಒಂದು ಪೀಠದ ಮೇಲೆ ಒಂದೊಂದು ಬಾನೆಯನ್ನು ಇಟ್ಟನು.


ಕೊಳದ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಸುಮಾರು ನಾಲ್ವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.


ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ: ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.


ಅರಸನಾದ ಆಹಾಜನು ಅಸ್ಸೀರಿಯದ ಅರಸನ ನಿಮಿತ್ತ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ನೀರಿನ ತೊಟ್ಟಿಗಳನ್ನು ತೆಗೆದಿಟ್ಟನು; ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಿನಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.


(ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಜುದೇಯದ ಹಾಗು ಜೆರುಸಲೇಮಿನ ಎಲ್ಲ ಮಂತ್ರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು, ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು