Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:51 - ಕನ್ನಡ ಸತ್ಯವೇದವು C.L. Bible (BSI)

51 ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಮಾಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಹೀಗೆಯೇ ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:51
15 ತಿಳಿವುಗಳ ಹೋಲಿಕೆ  

ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”


ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.


ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.


ಇದಲ್ಲದೆ, ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಸರ್ವೇಶ್ವರನ ಆಲಯದಲ್ಲಿ ತಂದಿಟ್ಟನು.


ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು.


ಹೀಗೆ ಸೊಲೊಮೋನನು ದೇವಾಲಯವನ್ನು ಕಟ್ಟಿಮುಗಿಸಿದನು.


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಅಗ್ಗಿಷ್ಟಿಕೆ, ಬಟ್ಟಲು, ಮೊದಲಾದುವುಗಳನ್ನು ದೋಚಿಕೊಂಡನು.


ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು