Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:21 - ಕನ್ನಡ ಸತ್ಯವೇದವು C.L. Bible (BSI)

21 ಇದಲ್ಲದೆ, ಈಜಿಪ್ಟಿನಿಂದ ಬಿಡುಗಡೆಹೊಂದಿದ ನಮ್ಮ ಪಿತೃಗಳಿಗೆ ಸರ್ವೆಶ್ವರನಿಂದ ದೊರೆತ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಲ್ಲಿ ಅದನ್ನು ಇಟ್ಟಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಐಗುಪ್ತದಿಂದ ಬಿಡುಗಡೆ ಹೊಂದಿದ ನಮ್ಮ ಪಿತೃಗಳಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನ ಪೆಟ್ಟಿಗೆಗಾಗಿ ಆಲಯದಲ್ಲಿ ನಾನೊಂದು ಸ್ಥಳವನ್ನು ಮಾಡಿದ್ದೇನೆ. ಯೆಹೋವನು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಈ ಪವಿತ್ರಪೆಟ್ಟಿಗೆಯಲ್ಲಿದೆ. ಯೆಹೋವನು ನಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಈ ಒಡಂಬಡಿಕೆಯನ್ನು ಮಾಡಿಕೊಂಡನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:21
8 ತಿಳಿವುಗಳ ಹೋಲಿಕೆ  

ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.


ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು;


ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.


ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು