Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:29 - ಕನ್ನಡ ಸತ್ಯವೇದವು C.L. Bible (BSI)

29 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:29
34 ತಿಳಿವುಗಳ ಹೋಲಿಕೆ  

ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ಸರ್ವೇಶ್ವರ ಜೆರುಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ


ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಅವರು ಈ ನಾಡಿನಲ್ಲಿ ನೆಲೆಗೊಂಡು ಇದರಲ್ಲಿ ನಿಮ್ಮ ಹೆಸರಿಗಾಗಿ ಒಂದು ಪವಿತ್ರಾಲಯವನ್ನು ಕಟ್ಟಿದರು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


“ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


“ಹೇ ಸರ್ವೇಶ್ವರಾ, ನಿಮ್ಮ ದಾಸನಾದ ಅರಸನ ಮೇಲೆಯೂ ಪ್ರಜೆಗಳಾದ ಇಸ್ರಯೇಲರ ಮೇಲೆಯೂ ಕಟಾಕ್ಷವಿಟ್ಟು, ಅವರು ಪ್ರಾರ್ಥಿಸುವಾಗೆಲ್ಲಾ, ಅವರ ವಿಜ್ಞಾಪನೆಗಳನ್ನು ಆಲಿಸಿರಿ.


ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


ಅವರು ತಮ್ಮ ನ್ಯಾಯಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಈಜಿಪ್ಟ್ ದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ, ಅದನ್ನು ವಧಿಸಬೇಕು.


ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು.


ಸೊಲೊಮೋನನ ಮಗ ರೆಹಬ್ಬಾಮನು ಜುದೇಯದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಅವನಿಗೆ ನಾಲ್ವತ್ತೊಂದು ವರ್ಷ ವಯಸ್ಸು. ಸರ್ವೆಶ್ವರ ತಮ್ಮ ಹೆಸರನ್ನು ನೆಲೆಗೊಳಿಸುವುದಕ್ಕಾಗಿ, ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.


ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು