Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:34 - ಕನ್ನಡ ಸತ್ಯವೇದವು C.L. Bible (BSI)

34 ಪರಲೋಕದಲ್ಲಿರುವ ನೀವು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪಿತೃಗಳಿಗೆ ನೀವು ಕೊಟ್ಟ ಈ ನಾಡಿಗೆ ಅವರನ್ನು ಮರಳಿಬರಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪರಲೋಕದಲ್ಲಿರುವ ನೀನು ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ಪಿತೃಗಳಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:34
20 ತಿಳಿವುಗಳ ಹೋಲಿಕೆ  

ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


“ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.


ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II


ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.


ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


“ತಮ್ಮ ಪಾಪಗಳ ಸಲುವಾಗಿ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


“ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,


ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II


“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ನಿಮ್ಮಲ್ಲಿ ಯಾರಾದರು ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟಿದ್ದರೂ ಅಲ್ಲಿಂದ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ಕರೆದುತರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು