Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:43 - ಕನ್ನಡ ಸತ್ಯವೇದವು C.L. Bible (BSI)

43 ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:43
19 ತಿಳಿವುಗಳ ಹೋಲಿಕೆ  

ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.


ನಿಮ್ಮ ದೇವರಾದ ಸರ್ವೇಶ್ವರ ನಮ್ಮ ಕಣ್ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಮುಂದೆಯೇ ಈ ಜೋರ್ಡನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾರೆ.


ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ಸಲ್ಲಿಸಿ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II


ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’


ನೀವು ನಿಮ್ಮ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಯೇಲರನ್ನು ಹಾಗು ಹಾಲೂಜೇನೂ ಹರಿಯುವ ನಾಡೆಂದು ನೀವು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂಮಿಯನ್ನು ಆಶೀರ್ವದಿಸಿ, ದೇವರೇ,’ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು