Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:61 - ಕನ್ನಡ ಸತ್ಯವೇದವು C.L. Bible (BSI)

61 ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಸರ್ವೇಶ್ವರನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಅವರ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಗೊಳ್ಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಆತನ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಕೊಳ್ಳಿರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ನಮ್ಮ ದೇವರಾದ ಯೆಹೋವನಿಗೆ ನೀವು ಪೂರ್ಣ ಭಯಭಕ್ತಿಯುಳ್ಳವರಾಗಿದ್ದು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಸದಾ ಅನುಸರಿಸಿರಿ; ಅವುಗಳಿಗೆ ವಿಧೇಯರಾಗಿರಿ. ಈಗ ನೀವು ವಿಧೇಯರಾಗಿರುವಂತೆಯೇ ಇನ್ನು ಮುಂದೆಯೂ ಆತನಿಗೆ ವಿಧೇಯರಾಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಇಂದಿನ ಹಾಗೆಯೇ ಅವರ ಕಟ್ಟಳೆಗಳಲ್ಲಿ ನಡೆಯಲೂ, ಅವರ ಆಜ್ಞೆಗಳನ್ನು ಕೈಗೊಳ್ಳಲೂ, ನಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಹೃದಯಗಳು ಪೂರ್ಣವಾಗಿ ಒಪ್ಪಿಸಿಕೊಟ್ಟದ್ದಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:61
14 ತಿಳಿವುಗಳ ಹೋಲಿಕೆ  

ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.


ನೀವು ನಿಮ್ಮ ದೇವರಾದ ಸರ್ವೇಶ್ವರನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರು ಆಗಿರಬೇಕು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು