Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:9 - ಕನ್ನಡ ಸತ್ಯವೇದವು C.L. Bible (BSI)

9 ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:9
25 ತಿಳಿವುಗಳ ಹೋಲಿಕೆ  

ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಅಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.


ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.


ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು,


ಅದರಲ್ಲಿ ಎರಡು ಕಲ್ಲಿನ ಹಲಗೆಗಳು ಹೊರತಾಗಿ ಬೇರೇನೂ ಇರಲಿಲ್ಲ. ಈಜಿಪ್ಟ್ ದೇಶದಿಂದ ಬಂದ ಇಸ್ರಯೇಲರೊಡನೆ, ಹೋರೇಬ್‍ಬೆಟ್ಟದ ಬಳಿ, ಸರ್ವೇಶ್ವರ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಅವುಗಳನ್ನು ಅದರಲ್ಲಿಟ್ಟಿದ್ದನು.


ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.


ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ಇದಲ್ಲದೆ, ಈಜಿಪ್ಟಿನಿಂದ ಬಿಡುಗಡೆಹೊಂದಿದ ನಮ್ಮ ಪಿತೃಗಳಿಗೆ ಸರ್ವೆಶ್ವರನಿಂದ ದೊರೆತ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಲ್ಲಿ ಅದನ್ನು ಇಟ್ಟಿದ್ದೇನೆ,” ಎಂದು ಹೇಳಿದನು.


ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಆದಕಾರಣ ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿಡು,” ಎಂದು ಹೇಳಿದನು.


ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.


ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು