Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:11 - ಕನ್ನಡ ಸತ್ಯವೇದವು C.L. Bible (BSI)

11 ತನಗೆ ಬೇಕಾದಷ್ಟು ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಹಾಗು ಬಂಗಾರವನ್ನು ಕೊಟ್ಟಿದ್ದ ಟೈರಿನ ಅರಸ ಹೀರಾಮನಿಗೆ, ಗಲಿಲೇಯ ಪ್ರಾಂತ್ಯದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೊಲೊಮೋನನ ಇಷ್ಟದ ಪ್ರಕಾರ ಟೈರಿನ ಅರಸನಾದ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಚಿನ್ನವನ್ನೂ ಕೊಟ್ಟಿದ್ದರಿಂದ ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ ಗಲಿಲಾಯ ದೇಶದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:11
9 ತಿಳಿವುಗಳ ಹೋಲಿಕೆ  

ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಯೇಲರು ನೆಲಸುವಂತೆ ಮಾಡಿದನು.


ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ಅರಸ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನು ಹಾಗು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು.


ಹೀರಾಮನು ಟೈರಿನಿಂದ ಬಂದು ಆ ಪಟ್ಟಣಗಳನ್ನು ನೋಡಿದನು. ಅವು ಅವನ ಮನಸ್ಸಿಗೆ ಹಿಡಿಸಲಿಲ್ಲ.


ಹೀರಾಮನು ಸೊಲೊಮೋನನಿಗೆ, ನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಕೊಟ್ಟನು.


ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು