Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:25 - ಕನ್ನಡ ಸತ್ಯವೇದವು C.L. Bible (BSI)

25 ಸೊಲೊಮೋನನು ಸರ್ವೇಶ್ವರನ ಆಲಯದ ಮುಂದೆ ಸರ್ವೇಶ್ವರನಿಗಾಗಿ ತಾನು ಕಟ್ಟಿಸಿದ ಬಲಿಪೀಠದ ಮೇಲೆ ವರ್ಷಕ್ಕೆ ಮೂರು ಸಾರಿ ದಹನಬಲಿ ಹಾಗು ಶಾಂತಿಸಮಾಧಾನಬಲಿಗಳನ್ನು ಸಮರ್ಪಿಸಿ ಧೂಪಾರತಿ ಎತ್ತುತ್ತಿದ್ದನು. ಹೀಗೆ ಅವನು ಮಹಾದೇವಾಲಯವನ್ನು ಕಟ್ಟಿಸಿಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅನಂತರ ಸೊಲೊಮೋನನು ವಿುಲ್ಲೋಕೋಟೆಯನ್ನು ಕಟ್ಟಿಸಿದನು. ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರುಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಸುಡುತ್ತಿದ್ದನು. ದೇವಾಲಯವನ್ನು ಕಟ್ಟಿಸಿ ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೊಲೊಮೋನನು ಪ್ರತಿವರ್ಷದಲ್ಲೂ ಮೂರು ಸಲ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸುತ್ತಿದ್ದನು. ಈ ಯಜ್ಞವೇದಿಕೆಯನ್ನು ಸೊಲೊಮೋನನು ಯೆಹೋವನಿಗಾಗಿ ನಿರ್ಮಿಸಿದನು. ರಾಜನಾದ ಸೊಲೊಮೋನನು ಯೆಹೋವನ ಮುಂದೆ ಸುಗಂಧ ಧೂಪವನ್ನು ಸುಡುತ್ತಿದ್ದನು. ಅವನು ಆಲಯಕ್ಕೆ ಬೇಕಾದ ವಸ್ತುಗಳನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:25
14 ತಿಳಿವುಗಳ ಹೋಲಿಕೆ  

ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಸರ್ವೇಶ್ವರನ ಆಲಯ ಸಿದ್ಧವಾಯಿತು.


“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು.


ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.


ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.


ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು.


ಹೀಗೆ ಸೊಲೊಮೋನನು ದೇವಾಲಯವನ್ನು ಕಟ್ಟಿಮುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು