Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:18 - ಕನ್ನಡ ಸತ್ಯವೇದವು C.L. Bible (BSI)

18 ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ನಾಸಾಕ್ ಘೆವ್ನ್ ಜಾತಲ್ಯಾ ವಾಟೆನ್ ಚಲ್ತಲ್ಯಾಕ್ನಿ ಕುರ್ಸಾಚಿ ಖಬರ್ ಎಕ್ ಪಿಶೆಪಾನ್‍ ಸಾರ್ಕೆ ದಿಸ್ತಾ, ಖರೆ ರಾಕನ್ ಹೊಲ್ಲ್ಯಾ ಅಮ್ಕಾ ತಿ ಖಬರ್ ದೆವಾಚೆ ಬಳ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:18
21 ತಿಳಿವುಗಳ ಹೋಲಿಕೆ  

ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ನಾವು ಪ್ರಚಾರಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು