Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:25 - ಕನ್ನಡ ಸತ್ಯವೇದವು C.L. Bible (BSI)

25 ‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಲೋಕದವರು ದೇವರಲ್ಲಿ ಯಾವದನ್ನು ಬುದ್ಧಿಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠ ಜ್ಞಾನವಾಗಿದೆ. ಅವರು ದೇವರಲ್ಲಿ ಯಾವದನ್ನು ಬಲಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ದೇವರ ಬುದ್ಧಿಹೀನತೆ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆ ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಪಿಶೆಪಾನ್ ಮಾನ್ಸಾಚ್ಯಾ ಶಾನ್ಪಾನಾನ್ ಬಿ ಶಾನೆ ಅನಿ ದೆವಾಚಿ ತಾಕತ್ ಕಮಿ ಮನ್ತಲೆ ಮಾನ್ಸಾಚ್ಯಾ ತಾಕ್ತಿಚ್ಯಾನ್ಕಿ ಜಾಸ್ತಿ ಘಟ್ಮುಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:25
16 ತಿಳಿವುಗಳ ಹೋಲಿಕೆ  

ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು