Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಮುಂದಿನ ಸಂಗತಿಯಲ್ಲಿ ನೀವು ಲಕ್ಷ್ಯವಿಡಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅದೇನಂದರೆ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮೊಯ್ಜೆಚ್ಯಾ ಫಾಟ್ನಾ ಗೆಲ್ಲ್ಯಾ ಅಮ್ಚ್ಯಾ ವಾಡ್ ವಡ್ಲಾಕ್ನಿ ಕಾಯ್ ಘಡ್ಲೆ ಮನುನ್ ತುಮಿ ಇಸ್ರುಚೆ ನ್ಹಯ್, ತೆನಿ ಸಗ್ಳೆ ಜಾನಾ ಮೊಡಾಚ್ಯಾ ಸಾವ್ಳಿಕ್ ಹೊತ್ತೆ ಅನಿ ಸಮುಂದರಾತ್ನಾ ಸಮೆತ್ ಉತ್ರುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:1
29 ತಿಳಿವುಗಳ ಹೋಲಿಕೆ  

ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II


ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.


ಯಾರಾದರು ಇದನ್ನು ಒಪ್ಪಿಕೊಳ್ಳದಿದ್ದರೆ, ನೀವು ಅವರನ್ನು ಒಪ್ಪಿಕೊಳ್ಳಬೇಕಾಗಿಲ್ಲ.


ಅವರು ಅಂಜದಂತೆ ನಡೆಸಿದನು ಸುರಕ್ಷಿತವಾಗಿ I ಶತ್ರುಗಳನೋ ಆವರಿಸಿತು ಸಮುದ್ರವು ನುಂಗಿ II


ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II


ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.


ನಿಮ್ಮ ದೇವರಾದ ಸರ್ವೇಶ್ವರ ನಮ್ಮ ಕಣ್ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಮುಂದೆಯೇ ಈ ಜೋರ್ಡನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾರೆ.


ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ ಕಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ಇರುಳಲ್ಲಿ ಬೆಂಕಿಯಲ್ಲೂ ಹಗಲಲ್ಲಿ ಮೇಘದಲ್ಲೂ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.


ಅಲ್ಲಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಏತಾಮಿನ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.


ಅಲ್ಲದೆ ಸರ್ವೇಶ್ವರಾ, ನೀವು ಇಸ್ರಯೇಲರ ನಡುವೆ ಇರುವುದಾಗಿ, ನೀವು ಇಸ್ರಯೇಲರಿಗೆ ಪ್ರತ್ಯಕ್ಷ ಕಾಣಿಸಿಕೊಳ್ಳುವುದಾಗಿ, ಹಗಲಿನಲ್ಲಿ ಮೇಘಸ್ತಂಭದಲ್ಲೂ, ಇರುಳಲ್ಲಿ ಅಗ್ನಿಸ್ತಂಭದಲ್ಲೂ ಇದ್ದು ಇವರ ಮುಂದೆ ನಡೆದು ಹೋಗುವುದಾಗಿ ಹಾಗೂ ನೀವಿರುವ ಮೇಘ ಇಸ್ರಯೇಲರ ಮೇಲೆ ಇರುವುದಾಗಿ ಈ ನಾಡಿನವರು ಕೇಳಿದ್ದಾರೆ.


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ಸಹೋದರರೇ, ಪವಿತ್ರಾತ್ಮ ಅವರ ವರದಾನಗಳ ಬಗ್ಗೆ ನೀವು ಸರಿಯಾದ ಅರಿವುಳ್ಳವರಾಗಿರಬೇಕು.


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ದೇವರು ಹುಟ್ಟುರೆಂಬೆಗಳನ್ನೇ ಉಳಿಸಲಿಲ್ಲ ಎಂದಮೇಲೆ ನಿನ್ನನ್ನು ಉಳಿಸುವರೆಂದು ತಿಳಿಯುವೆಯಾ?


ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು