Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:13 - ಕನ್ನಡ ಸತ್ಯವೇದವು C.L. Bible (BSI)

13 ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನ್ಸಾಚ್ಯಾನ್ ಜಿಕುಕ್ ಹೊಯ್ನಾ ತಸ್ಲಿ ಪರಿಕ್ಷಾ ಅಮ್ಕಾ ಅಜುನ್ ಪತರ್ ಯೆವ್ಕ್ ನಾ. ದೆವ್ ವಿಶ್ವಾಸಿ, ತೊ ಅಮ್ಕಾ ಆಟ್ಪಿನಾ ತಸ್ಲಿ ಪರಿಕ್ಷಾ ಯೆವ್ಕ್ ಸೊಡಿ ನಾ; ಪರಿಕ್ಷಾ ಯೆಲ್ಲ್ಯಾ ವೆಳಾರ್ ತೆಚೆ ವೈರ್ ಜಿಕುಕ್ ಉಪಾಯ್ ಅನಿ ಘಟ್ ರ್‍ಹಾವ್ಕ್ ತಾಕತ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:13
48 ತಿಳಿವುಗಳ ಹೋಲಿಕೆ  

ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.


ನಿಮ್ಮನ್ನು ಕರೆದ ದೇವರು ಇದನ್ನು ಈಡೇರಿಸುವರು; ಏಕೆಂದರೆ, ದೇವರು ನಂಬಿಕಸ್ಥರು.


ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.


ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಹೊಸಹೊಸದಾಗಿ ಅವು ಒದಗುತ್ತವೆ ದಿನದಿನವು ಮಹತ್ತರವಾದುದು ಆತನ ಸತ್ಯಸಂಧತೆಯು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.


ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು.


ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.


ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”


ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II


ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಆದರೆ ನನ್ನೊಲವು ಅವನನ್ನು ಕೈಬಿಡದು I ನನ್ನ ಪ್ರಾಮಾಣಿಕತೆಗದು ಚ್ಯುತಿಯಾಗದು II


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ.


(ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಮಿಕ್ಕವರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ದಡಸೇರಬೇಕೆಂತಲೂ ಆಜ್ಞೆಮಾಡಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡವನ್ನು ಸೇರಿದರು.


ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಆದ್ದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು