Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:18 - ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ವಂಶಕ್ರಮದಿಂದ ಇಸ್ರಾಯೇಲ್ಯರಾಗಿರುವವರನ್ನು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಭಾಗಿಗಳಾಗಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಇಸ್ರಾಯೆಲ್ ಲೊಕಾಕ್ನಿ ಯಾದ್ ಕರಾ ತೆನಿ ಬಲಿ ಮನುನ್ ಭೆಟ್ವಲ್ಲೆ ಜೆ ಕೊನ್ ಖಾತಾತ್, ತೆನಿ ಭೆಟ್ವುತಲ್ಯಾ ಅಲ್ತಾರಿಚ್ಯಾ ವೈನಾ ದೆವಾಚ್ಯಾ ಸೆವೆತ್ ಎಕ್ ಹೊತ್ಯಾತ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:18
18 ತಿಳಿವುಗಳ ಹೋಲಿಕೆ  

ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ಹೋಮ ಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರು ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ತಿನ್ನಬೇಕು.


ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.


ದೇವಾಲಯದ ಸೇವೆಯಲ್ಲಿರುವವರು ದೇವಾಲಯದ ಆದಾಯದಿಂದ ಜೀವಿಸುತ್ತಾರೆ. ಬಲಿಪೀಠದ ಬಳಿ ಸೇವೆಮಾಡುವವರು ಅರ್ಪಿತವಾದ ಬಲಿಯಿಂದ ಪಾಲನ್ನು ಪಡೆಯುತ್ತಾರೆ. ಇದು ನಿಮಗೆ ತಿಳಿದಿದೆ.


ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ.


ಹಾಗಾದರೆ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ?


ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.


ಈ ಪ್ರಾಯಶ್ಚಿತ್ತ ಹಾಗು ದೋಷಪರಿಹಾರಕ ಬಲಿ ಹೋಮ ಶೇಷಗಳಿಗೆ ಇರುವ ವಿಧಿ ಒಂದೇ; ಈ ಹೋಮಶೇಷಗಳು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕವು.


“ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು