Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:21 - ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಭೋಜನವಾಗುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ, ಭೋಜನ ಮಾಡುವಾಗ, ಪ್ರತಿಯೊಬ್ಬನು ಇತರರಿಗಾಗಿ ಕಾಯದೇ, ತನ್ನ ಭೋಜನವನ್ನು ಮುಂಚಿತವಾಗಿ ಆರಂಭಿಸುತ್ತಾನೆ. ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್ ಜೆವಾನ್ ಕರ್‍ತಲ್ಯಾಕ್ಡೆ ಎಕ್ಲೊ ಅನಿಎಕ್ಲ್ಯಾಕ್ ರಾಕಿ ನಸ್ತಾನಾ ಅಪ್ನಿ ಹಾನಲ್ಲೆ ಜೆವಾನ್ ಜವ್ಕ್ ಅವಸರ್ ಕರ್‍ತಾ, ಅಶೆ ಎಕ್ಲೊ ಉಪ್ಪಾಸಿ ರ್‍ಹಾತಾನಾ ಅನಿ ಎಕ್ಲೊ ಫಿವ್ನ್ ನಿಶೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:21
7 ತಿಳಿವುಗಳ ಹೋಲಿಕೆ  

ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.


ಆದರೂ ನೀವೆಲ್ಲಾ ಒಂದಾಗಿ ಸೇರುವಾಗ ನೀವು ಮಾಡುವ ಭೋಜನ ಪ್ರಭುವಿನ ಭೋಜನವಲ್ಲ.


ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು