Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:27 - ಕನ್ನಡ ಸತ್ಯವೇದವು C.L. Bible (BSI)

27 ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗಿರುವದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ದ್ರೋಹಮಾಡಿದವನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಸೆ ಮನುನ್ ಜೆ ಕೊನ್ ಯೊಗ್ಯ್ ನಸ್ತಾನಾ ಹಿ ಭಾಕ್ರಿ ಖಾತಾ, ನಾ ಹೊಲ್ಯಾರ್ ಧನಿಯಾಚ್ಯಾ ಆಂಗಾ ಅನಿ ರಗ್ತಾಚ್ಯಾ ವಿರೊದ್ ಚುಕ್ ಕರ್‍ತಾ ಅನಿ ತೊ ಚುಕಿದಾರ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:27
11 ತಿಳಿವುಗಳ ಹೋಲಿಕೆ  

ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.


“ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು - ‘ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಾಗಲಿ ಶವ ಸೋಂಕಿದುದರಿಂದ ಅಶುದ್ಧರಾದವರು ಮಾತ್ರವಲ್ಲ ದೂರ ಪ್ರಯಾಣದಲ್ಲಿರುವವರು ಕೂಡ ಸರ್ವೇಶ್ವರನ ಆಜ್ಞಾನುಸಾರ ಪಾಸ್ಕ ಹಬ್ಬವನ್ನು ಆಚರಿಸಲೇಬೇಕು.


“ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ.


ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು